ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು, ವಾರಣಾಸಿಯಲ್ಲಿ ಸ್ಪರ್ಧಿಸಬಾರದು ಎಂಬುದು ಪ್ರಿಯಾಂಕಾ ಗಾಂಧಿ ಅವರೇ ತೆಗೆದುಕೊಂಡ ನಿರ್ಧಾರ. ಏಕೆಂದರೆ ಅವರ ಜವಾಬ್ದಾರಿಯೇ ಬೇರೆ. ಒಂದು ಕಡೆ ಸ್ಪರ್ಧೆಗೆ ನಿಂತರೆ ಬೇರೆ ಕಡೆ ಗಮನ ನೀಡುವುದಕ್ಕೆ ಸಾಧ್ಯವಾಗುದಿಲ್ಲ. ಒಂದೇ ಒಂದು ಕ್ಷೇತ್ರದ ಬಗ್ಗೆ ಗಮನ ಹರಿಸುವುದಕ್ಕಿಂತ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ಗಮನ ನೀಡಿ, ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು ಎಂಬುದು ಪ್ರಿಯಾಂಕಾ ಗಾಂಧಿ ಅವರ ಅಭಿಪ್ರಾಯ ಎಂದಿದ್ದಾರೆ.