ಮುಂಬೈಯ ಬಿಕೆಸಿ ಮೈದಾನದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಜೊತೆ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬದಲಿ ಸರ್ಕಾರವನ್ನು ಜನರು ಬಯಸುತ್ತಿಲ್ಲ, ಬದಲಿಗೆ ದೇಶದಲ್ಲಿ ನಿರ್ಣಾಯಕ, ಬಡವರ ಏಳಿಗೆಗೆ ಶ್ರಮಿಸುವ ಮತ್ತು ಭಯೋತ್ಪಾದನೆಯನ್ನು ಕೊನೆಗಾಣಿಸುವ ದಿಟ್ಟ ನಿರ್ಧಾರ ಕೈಗೊಳ್ಳಲು ಎನ್ ಡಿಎ ಮೈತ್ರಿಕೂಟದ ಮೇಲೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬರುತ್ತದೆ ಎಂದು ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿವೆ. ಎಷ್ಟು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂಬುದಿರುವುದು ಎಂದು ಮೋದಿ ಹೇಳಿದರು.