ಕ್ಷೇತ್ರದ ಮತಗಟ್ಟೆ ಸಂಖ್ಯೆ 199ರಲ್ಲಿ ಟಿಎಂಸಿ ಮತ್ತು ಸಿಆರ್ ಪಿಎಫ್ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸಿದ್ದು, 125 ಮತ್ತು129ನೇ ಮತಗಟ್ಟೆಗಳಲ್ಲಿ ಬಿಜೆಪಿ, ಸಿಪಿಎಂ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಭದ್ರತಾ ಸಿಬ್ಬಂದಿ ಇರದೇ ಇದ್ದರೂ ಮತದಾನ ಪ್ರಕ್ರಿಯೆ ಆರಂಭವಾಗಬೇಕು ಎಂದು ಟಿಎಂಸಿ ಕಾರ್ಯಕರ್ತರು ಆಗ್ರಹಿಸಿದ್ದರಿಂದ ಈ ಗಲಾಟೆ ಆರಂಭವಾಯಿತು. ಭದ್ರತೆಯೊಂದಿಗೇ ಮತದಾನ ಆರಂಭವಾಗಬೇಕು ಎಂದು ಸಿಪಿಎಂ ಮತ್ತು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರು. ಈ ವೇಳೆ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಘಟನೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಯೋಧರು ಮತ್ತು ಸೈನಿಕರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.