ಇಂದು ಪಕ್ಷದ ಒಬಿಸಿ ಘಟಕದ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ಐದು ವರ್ಷಗಳ ಬಿಜೆಪಿ ಆಡಳಿತದಲ್ಲಿ ಕೋಟ್ಯಾಧಿಪತಿ ಉದ್ಯಮಿಗಳಿಗೆ ಲಕ್ಷಾಂತರ ಕೋಟಿ ರುಪಾಯಿ ನೀಡಲಾಗಿದೆ. ಆದರೆ ದೇಶದ ಬಡ ಜನರಿಗೆ 15 ಲಕ್ಷ ರುಪಾಯಿ ನೀಡುವುದಾಗಿ ಸುಳ್ಳು ಭರವಸೆ ನೀಡಿದ್ದರು ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.