ಈ ಹಿಂದೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚುನಾವಣೆ ರ್ಯಾಲಿ ನಡೆಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಮಮತಾ ಬ್ಯಾನರ್ಜಿಯನ್ನು ಟೀಕೆ ಮಾಡಿದ್ದರು. ಪಶ್ಚಿಮ ಬಂಗಾಳದಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, 'ಒಂದು ಕಡೆ ಮೋದಿ ಜೀ ಸುಳ್ಳುಗಳನ್ನು ಹೇಳುತ್ತಿರುತ್ತಾರೆ ಹಾಗೂ ಮತ್ತೊಂದು ಕಡೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇವಲ ಭರವಸೆಗಳನ್ನು ನೀಡುತ್ತಿರುತ್ತಾರೆ. ಆದರೆ, ಅದ್ಯಾವುದೂ ನಡೆಯುವುದಿಲ್ಲ' ಎಂದು ಟೀಕೆ ಮಾಡಿದ್ದರು.