ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ್ದು, 'ಹರ್ಯಾಣದ ರೇವಾರಿಯ ನಿವಾಸಿಯಾಗಿರುವ ತೇಜ್ ಬಹದ್ದೂರ್ ಯಾದವ್, ವಾರಣಾಸಿಯಲ್ಲಿ ತಾವು ಮೋದಿ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ. ಹಲವು ಮಂದಿ ರಾಜಕಾರಣಿಗಳು ತಮ್ಮ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ. ಆದರೆ ತಾನು ಪಕ್ಷೇತರ ಅಭ್ಯರ್ಥಿಯಾಗಿಯೇ ಕಣಕ್ಕೆ ಇಳಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.