ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹಲವು ದೂರುಗಳನ್ನು ನೀಡಿದೆ. ಆದರೆ ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್, ಅಲ್ಪಸಂಖ್ಯಾತ ಮತಕ್ಷೇತ್ರಕ್ಕೆ ರಾಹುಲ್ ಗಾಂಧಿ ಸ್ಪರ್ಧೆ ಹಾಗೂ ಪಾಕಿಸ್ತಾನದ ಮೇಲೆ ಅಣ್ವಸ್ತ್ರ ಬಳಕೆ ಹೇಳಿಕೆ ಕುರಿತು ಈಗಾಗಲೇ ಚುನಾವಣಾ ಆಯೋಗ ಮೋದಿಗೆ ಕ್ಲೀನ್ ಚಿಟ್ ನೀಡಿದೆ. ಇದರಲ್ಲಿ ಅಣ್ವಸ್ತ್ರಕ್ಕೆ ಸಂಬಂಧಿಸಿದ ಹೇಳಿಕೆ ಹೊರತುಪಡಿಸಿ ಉಳಿದೆ ಪ್ರಕರಣಗಳಲ್ಲಿ ಪ್ರಧಾನಿಗೆ ಕ್ಲೀನ್ಚಿಟ್ ನೀಡಲು ಓರ್ವ ಆಯುಕ್ತರು ತೀವ್ರ ಆಕ್ಷೇಪವ್ಯಕ್ತಪಡಿಸಿದ್ದರು. ಪ್ರಧಾನಿ ವಿರುದ್ಧ ಕ್ರಮ ಅಥವಾ ಎಚ್ಚರಿಕೆ ಸಂದೇಶ ನೀಡಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.