ಇದೇ ವೇಳೆ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ ಪಿತ್ರೋಡಾ, ಸಮುದಾಯಗಳನ್ನು ಒಡೆಯುವುದರಿಂದ ಅಥವಾ ಅವರ ನಡುವೆ ಕೋಮು ಗಲಭೆ ಉಂಟು ಮಾಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ. ಜನರ ನಡುವೆ ಸಂಘರ್ಷ ಮೂಡಿಸುವುದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ಮಿತ್ರಪಕ್ಷಗಳಿಗೂ ಗೊತ್ತು. ಸರಿಯಾದ ಸಂದರ್ಭದಲ್ಲಿ ಅವರು ನಮ್ಮ ಜೊತೆ ಕೈ ಜೋಡಿಸುತ್ತಾರೆ ಎಂದು ಹೇಳಿದ್ದಾರೆ. ಅಂತೆಯೇ ಹಾಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸಲಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.