ಜಾರ್ಖಂಡ್ : ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಟೀಕಿಸುವ ಪ್ರಧಾನಿ ನರೇಂದ್ರ ಮೋದಿ ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಚೈಬಾಸಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮನರೇಗಾ ಯೋಜನೆಯನ್ನು ಅಪಮಾನಿಸುತ್ತಾರೆ. ಈ ಯೋಜನೆಯಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿ ಕೋಟ್ಯಂತರ ಜನರಿಗೆ ಉದ್ಯೋಗ ಸಿಕ್ಕಿದ್ದರೂ ಕಾಂಗ್ರೆಸ್ ಏನು ಮಾಡಿಲ್ಲ ಎಂದು ಸಂಸತ್ತಿನಲ್ಲಿ ಮೋದಿ ಹೇಳುತ್ತಾರೆ. ಬಡವರಿಗೆ ಅಪಮಾನ ಮಾಡಬೇಡಿ, ಅವರಿಗೆ ಗೌರವ ಕೊಡಿ ಎಂದು ಹೇಳಿದರು.
Advertisement
Advertisement