ಅಮರಾವತಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರದ ಬಗ್ಗೆ ಕಾಳಜಿ ಹೊಂದಿರುವ ಉತ್ತಮ ನಾಯಕರಾಗಿದ್ದಾರೆ. 1996ರಂತೆ ಬಿಜೆಪಿಯೇತರ ಸರ್ಕಾರಗಳು ಕೇಂದ್ರದಲ್ಲಿ ಅಧಿಕಾರ ರಚಿಸಿದರೆ ಕಾಂಗ್ರೆಸ್ ಪಕ್ಷವನ್ನು ಹೊರಗಿಡುವ ತಪ್ಪನ್ನು ಮಾಡಬಾರದು ಎಂದು ಟಿಡಿಪಿ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಬಿಜೆಪಿಯಿಂದ ಸರ್ಕಾರ ರಚನೆ ಅಸಾಧ್ಯ ಎಂದು ಹೇಳಿರುವ ಚಂದ್ರಬಾಬು ನಾಯ್ಡು ಸಮ್ಮಿಶ್ರ ಸರ್ಕಾರದ ಪರ ಬ್ಯಾಟ್ ಮಾಡಿದ್ದು, ಹೊಂದಾಣಿಕೆ ಉತ್ತಮ ಎಂದು ಹೇಳಿದ್ದಾರೆ.
ಬಿಜೆಪಿಯೇತರ ಪ್ರಧಾನ ಮಂತ್ರಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಚಂದ್ರಬಾಬು ನಾಯ್ಡು, ಪ್ರಾದೇಶಿಕ ಪಕ್ಷಗಳು ಕೂಡಿ ಸಮ್ಮಿಶ್ರ ಸರ್ಕಾರ ರಚಿಸಿದರೆ ಪ್ರತಿ ಪಕ್ಷವು ಪಡೆಯುವ ಸ್ಥಾನಗಳ ಸಂಖ್ಯೆ ಬಗ್ಗೆ ಸಮಾಲೋಚಿಸಿದ ನಂತರ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹತಾಶರಾಗಿದ್ದಾರೆ ಎಂದು ಚಂದ್ರಬಾಬು ನಾಯ್ಡು ಹೇಳಿದರು.
Advertisement