ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೋಲುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಬಿಜೆಪಿಯನ್ನು ಆರ್ ಎಸ್ಎಸ್ ಬೆಂಬಲಿಸುತ್ತಿಲ್ಲಾ ಎಂಬುದೂ ಸ್ಪಷ್ಟ, ಏಕೆಂದರೆ ಬಿಜೆಪಿ ಈ ಹಿಂದಿನ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈ ರೀತಿಯಿದ್ದಾಗ ಬಿಜೆಪಿಯನ್ನು ಬೆಂಬಲಿಸಿದರೆ ಸಾರ್ವಜನಿಕರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಆರ್ ಎಸ್ಎಸ್ ಅರಿತಿದೆ ಎಂದು ಮಾಯಾವತಿ ಹೇಳಿದ್ದಾರೆ.