ಈ ಸಂಬಂಧ ಘಟನೆಯ ವಿವರ ನೀಡಲು ದೆಹಲಿಯಲ್ಲಿಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ಘಟನೆ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಸಿಆರ್ ಪಿಎಫ್ ಯೋಧರು ತಮ್ಮನ್ನು ರಕ್ಷಿಸಲು ಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು ಎಂದು ಸಾಕ್ಷಿಯಾಗಿ ಫೋಟೋಗಳನ್ನು ಪ್ರದರ್ಶಿಸಿದರು.