ಸೋತಿರುವವರು ಎಲ್ಲವನ್ನೂ ಕಳೆದುಕೊಂಡಿಲ್ಲ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ ಗೆಲುವಿನ ನಗೆ ಬೀರುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯೆ ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ ಗೆಲುವಿನ ನಗೆ ಬೀರುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗೆದ್ದವರಿಗೆ ಅಭಿನಂದನೆಗಳು, ಆದರೆ ಸೋತವರು ಎಲ್ಲ ಕಳೆದುಕೊಂಡವರಲ್ಲ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಗೆಲುವು ಕಾಣದಂತೆ ತಮ್ಮ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ನ್ನು ಜಯದ ಉತ್ತುಂಗಕ್ಕೆ ಕೊಂಡೊಯ್ಯಬೇಕೆಂದು ಮಮತಾ ಬ್ಯಾನರ್ಜಿ ಭಾರೀ ಪ್ರಯತ್ನ ಪಟ್ಟಿದ್ದರು. ಆದರೆ ಬಿಜೆಪಿ ಸಹ ಬಿಟ್ಟುಕೊಡಲಿಲ್ಲ. ಪ್ರಧಾನಿ ಮೋದಿಯಾಗಿ ಅಮಿತ್ ಶಾ ಎಲ್ಲರೂ ವ್ಯಾಪಕವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. 42 ಕ್ಷೇತ್ರಗಳಲ್ಲಿ ಸುತ್ತಾಡಿ ಜನಮನ ಗೆಲ್ಲಲು ಪ್ರಯತ್ನಿಸಿದ್ದರು.
ಇದರಿಂದಾಗಿ ತೃಣಮೂಲ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ 23 ಸ್ಥಾನಗಳನ್ನು ಗೆದ್ದರೆ ಬಿಜೆಪಿ ಸ್ಪರ್ಧಿಸಿದ 42 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳಲ್ಲಿ ಕಮಲ ಅರಳುವಂತೆ ಮಾಡಿದೆ.
ನಾವು ಈ ಸಂದರ್ಭದಲ್ಲಿ ಸಂಪೂರ್ಣ ಪರಾಮರ್ಶೆ ನಡೆಸಿ ನಂತರ ನಮ್ಮ ಪರಾಮರ್ಶೆಯನ್ನು ನಿಮ್ಮಲ್ಲಿ ಹಂಚಿಕೊಳ್ಳುತ್ತೇವೆ. ಮತ ಎಣಿಕೆ ಕಾರ್ಯ ಸಂಪೂರ್ಣ ಮುಗಿದ ನಂತರ ವಿವಿಪ್ಯಾಟ್ ಹೊಂದಿಕೆಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com