'ಭಾರತ ಮತ್ತೊಮ್ಮೆ ಗೆದ್ದಿದೆ'; ಪ್ರಧಾನಿ ನರೇಂದ್ರ ಮೋದಿ

17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಬರುವ ಸೂಚನೆ ಸಿಕ್ಕಿದ್ದು... ಬಾರಿಗೆ ...
ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪುಷ್ಪ ದಳಗಳನ್ನು ಹಾಕಿ ಗೆಲುವಿನ ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು
ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪುಷ್ಪ ದಳಗಳನ್ನು ಹಾಕಿ ಗೆಲುವಿನ ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು
Updated on
ನವದೆಹಲಿ: 17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಗುವ ಸೂಚನೆ ಸಿಕ್ಕಿದ್ದು ಈ ಸಂದರ್ಭದಲ್ಲಿ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಾವೆಲ್ಲರೂ ಒಟ್ಟು ಸೇರಿ ಎಲ್ಲವನ್ನೂ, ಎಲ್ಲರನ್ನೂ ಒಳಗೊಂಡ ಬಲಿಷ್ಠ ಭಾರತವನ್ನು ನಿರ್ಮಿಸೋಣ ಎಂದು ಕರೆ ಕೊಟ್ಟಿದ್ದಾರೆ.
ಮತ್ತೊಮ್ಮೆ ಪ್ರಧಾನಿ ಪಟ್ಟವನ್ನೇರಲು ಸಜ್ಜಾಗಿರುವ ನರೇಂದ್ರ ಮೋದಿ ಟ್ವೀಟ್ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ನಾವೆಲ್ಲರೂ ಒಟ್ಟಾಗಿ ಬೆಳೆಯೋಣ, ಒಟ್ಟಾಗಿ ಏಳಿಗೆ ಹೊಂದೋಣ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಟ್ಟಾಗಿ ಶ್ರಮಿಸೋಣ, ಭಾರತ ಮತ್ತೊಮ್ಮೆ ಜಯ ಗಳಿಸಲಿದೆ, ವಿಜಯೀ ಭಾರತ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com