ಇದುವರೆಗೆ ರೈಲ್ವೆಗೆ ಹೇಗೆ ಪ್ರತ್ಯೇಕ ಬಜೆಟ್ ಇರುತ್ತದೋ ಅದೇ ರೀತಿ ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿದ್ದೇವೆ.ಇದು ನಮ್ಮ ಪಕ್ಷದ ಐತಿಹಾಸಿಕ ನಿರ್ಧಾರ, ಮಧ್ಯಪ್ರದೇಶ, ಕರ್ನಾಟಕ, ಛತ್ತೀಸ್ಗಢ, ಪಂಜಾಬ್ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಸಾಲಮನ್ನಾ ಮಾಡಲಾಗಿದೆ ನೀರವ್ ಮೋದಿ, ಅನಿಲ್ ಅಂಬಾನಿ, ವಿಜಯ್ ಮಲ್ಯನಂತವರು ಕೋಟ್ಯಂತರ ರೂ. ಸಾಲ ಮಾಡಿ ಶಿಕ್ಷೆಯಿಂದ ಬಚಾವಾಗುತ್ತಾರೆ.ಆದರೆ, ನಮ್ಮ ಬಡ ರೈತರು ಬ್ಯಾಂಕಿಂದ ಪಡೆದ ಸಾಲ ಕಟ್ಟಿಲ್ಲವೆಂದರೆ ಅವರನ್ನು ಅಪರಾಧಿಗಳೆಂದು ಘೋಷಿಸಲಾಗುತ್ತದೆ, ಜೈಲಿಗೆ ಹಾಕಲಾಗುತ್ತದೆ, ಇದರಿಂದ ತಪ್ಪಿಸಿ ದೇಶದ ಬಡ, ಮುಗ್ಧ ರೈತರನ್ನು ಕಾಪಾಡಲು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಮಿನಲ್ ಮೊಕದ್ದಮೆಯನ್ನು ತೆಗೆದುಹಾಕಲಾಗುವುದು ಎಂದು ಘೋಷಿಸಿದರು.