ನಕ್ಸಲ್ಬಾರಿ: ಪ್ರಧಾನಿ ನರೇಂದ್ರ ಮೋದಿ ಅವರ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ ಸಂಪೂರ್ಣ ವಿಫಲವಾಗಿದೆ. ಆದರೆ ಹೆಣ್ಣುಮಕ್ಕಳ ಅಭ್ಯುದಯಕ್ಕಾಗಿ ಟಿಎಂಸಿ ಸರ್ಕಾರ ಜಾರಿಗೆ ತಂದ ಕನ್ಯಾಶ್ರೀ ಯೋಜನೆ ಯಶಸ್ವಿಯಾಗಿದೆ ಮತ್ತು ವಿಶ್ವಸಂಸ್ಥೆಯ ಪ್ರಶಸ್ತಿಗೂ ಪಾತ್ರವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಹೇಳಿದ್ದಾರೆ.