ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಮ್ಮುಖದಲ್ಲಿ ಶತ್ರುಘ್ನ ಸಿನ್ಹ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷ ಸೇರಿದ ಕೆಲ ಗಂಟೆಗಳಲ್ಲೇ ಕಾಂಗ್ರೆಸ್ ಫೈರ್ ಬ್ರಾಂಡ್, ಮತ್ತು ರೆಬೆಲ್ ಸ್ಟಾರ್ ನಟ ಶತ್ರುಘ್ನ ಸಿನ್ಹಾರನ್ನುಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಇದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ.