ಪಶ್ಚಿಮ ಬಂಗಾಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ಇತ್ತೀಚೆಗೆ ಆದೇಶ ಹೊರಡಿಸಿದ್ದು ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಂಡಮಂಡಲರಾಗಿದ್ದಾರೆ. ಚುನಾವಣಾ ಆಯೋಗ ಪಕ್ಷಪಾತ ಧೋರಣೆ ತಳೆಯುತ್ತಿದೆ ಎಂದು ಮಮತಾ ಬ್ಯಾನರ್ಜಿಯವರು ಪತ್ರ ಬರೆದಿದ್ದು ಬಿಜೆಪಿಯ ಪರವಾಗಿ ಆಯೋಗ ಕೆಲಸ ಮಾಡುತ್ತಿದೆ ಎಂದಿದ್ದಾರೆ.