ನಾನು ಇಮ್ರಾನ್ ಖಾನ್ ಅವರ ಹೇಳಿಕೆಯನ್ನು ಖಂಡಿಸುತ್ತೇನೆ, ಭಾರತದಂತಹ ಶ್ರೇಷ್ಠ ರಾಷ್ಟ್ರದ ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವ ಹಕ್ಕು ಇಮ್ರಾನ್ ಖಾನ್ ಗೆ ಇಲ್ಲ. ಭಾರತದಲ್ಲಿ ನ್ಯಾಯ ಹಾಗೂ ಮುಕ್ತ ಚುನಾವಣೆ ನಡೆಯುತ್ತದೆ. ಆದರೆ ಪಾಕಿಸ್ತಾನದ ಚುನಾವಣೆಯನ್ನು ಅಲ್ಲಿನ ಸೇನೆ ಹಾಗೂ ಗುಪ್ತಚರ ಇಲಾಖೆಯ ನಿಯಂತ್ರಣದಲ್ಲಿ ನಡೆಯುತ್ತದೆ. ಇಮ್ರಾನ್ ಖಾನ್ ಅಂತಹ ದೇಶದವರು. ಕಾಶ್ಮೀರ ಸಮಸ್ಯೆ ಬಗೆಹರಿಸುವುದಕ್ಕೆ ಮತ್ತೆ ಮೋದಿ ಪ್ರಧಾನಿಯಾಗಬೇಕೆಂದು ಇಮ್ರಾನ್ ಖಾನ್ ಹೇಳುವುದು ತಪ್ಪು ಕಾಶ್ಮೀರ ಯಾರದ್ದೇ ಖಾಸಗಿ ಸ್ವತ್ತು ಅಲ್ಲ, ಅದು ಭಾರತದ ಅವಿಭಾಜ್ಯ ಅಂಗ ಎಂದು ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.