ಇದೇ ವೇಳೆ ಇಂತಹ ಟೀಕೆಗಳು ನನಗೇನು ಹೊಸದಲ್ಲ. ಇಂತಹ ಟೀಕೆಗಳಿಂದ ನಾನು ಮತ್ತಷ್ಟು ಗಟ್ಟಿಗೊಳ್ಳುತ್ತೇನೆ. ನನ್ನ ಗುರಿ ನಿಖರವಾಗಿದ್ದು, ಜನರ ಸೇವೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದ ಜಯಪ್ರದಾ ಅವರು, ಅಜಂಖಾನ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. 'ಇಂತಹ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಡಬಾರದು. ಒಂದು ವೇಳೆ ಇಂತಹವರು ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭತ್ವದ ಗತಿ ಏನು..? ಆಗ ಸಮಾಜದಲ್ಲಿ ಮಹಿಳೆಯರಿಗೆ ಸ್ಥಾನವೇ ಇಲ್ಲದಂತಾಗುತ್ತದೆ. ನಾವು ಎಲ್ಲಿಗೆ ಹೋಗಬೇಕು.. ನಮ್ಮ ಅಸ್ಥಿತ್ವವನ್ನು ಹೇಗೆ ರಕ್ಷಿಸಿಕೊಳ್ಳಬೇಕು? ಒಂದು ವೇಳೆ ನಿಮ್ಮ ಈ ಹೇಳಿಕೆಗಳಿಂದ ನಾನು ಭಯಪಡುತ್ತೇನೆ ಮತ್ತು ರಾಂಪುರದಿಂದ ಓಡಿ ಹೋಗುತ್ತೇನೆ ಎಂದು ನೀವು ಭಾವಿಸಿದ್ದರೆ.. ಅದು ನಿಮ್ಮ ತಪ್ಪು ನಿರ್ಣಯ.. ಯಾವುದೇ ಕಾರಣಕ್ಕೂ ನಾನು ಕ್ಷೇತ್ರ ಬಿಟ್ಟು ಪರಾರಿಯಾಗುವುದಿಲ್ಲ. ಬದಲಿಗೆ ಮತ್ತಷ್ಟು ಗಟ್ಟಿಗೊಂಡು ಪ್ರಚಾರ ನಡೆಸುತ್ತೇವೆ ಎಂದು ಜಯಪ್ರದ ಹೇಳಿದ್ದಾರೆ.