ಚುನಾವಣಾ ಆಯೋಗದಿಂದ 72 ಗಂಟೆ ಪ್ರಚಾರಕ್ಕೆ ನಿಷೇಧ: ಹನುಮ ದೇವಾಲಯದಲ್ಲಿ ಯೋಗಿ ಆದಿತ್ಯನಾಥ್ ಪೂಜೆ

ಕೋಮು ಸಾಮರಸ್ಯ ಕದಡುವಂತ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಕ್ನೋ: ಕೋಮು ಸಾಮರಸ್ಯ ಕದಡುವಂತ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ದೇಶಾದ್ಯಂತ 72 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ. 
ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಹನುಮಾನ್ ದೇವಾಲಯದಲ್ಲಿ ಸುಮಾರು 20 ನಿಮಿಷಗಳ ಕಾಲ ಪೂಜೆ ಸಲ್ಲಿಸಿದರು, ನಂತರ ಅಲ್ಲಿದ್ದ ಮಾಧ್ಮಗಳು ಕೇಳಿದ ಯಾವುದೇ ಪ್ರಶ್ನೆಗೆ ಉತ್ತರಿಸದೆ ತೆರಳಿದ್ದಾರೆ.
ಮೀರತ್ ನಲ್ಲಿ ಯೋಗಿ ಆದಿತ್ಯನಾಥ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ಮುಂದಿನ 72 ಗಂಟೆಗಳ ಕಾಲ ದೇಶದ ಯಾವುದೇ ಭಾಗದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳದಂತೆ ನಿಷೇಧ ಹೇರಿದೆ.ಹೀಗಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಾಮಪತ್ರ ಸಲ್ಲಿಕೆ ಕಾರ್ಯದಲ್ಲೂ ಯೋಗಿ ಆದಿತ್ಯನಾಥ್ ಭಾಗವಹಿಸಿರಲಿಲ್ಲ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com