ಕಾಂಗ್ರೆಸ್ ಜನಾಕ್ರೋಶ ಸಭೆಯಲ್ಲಿ ಹಾರ್ದಿಕ್ ಪಟೇಲ್ ಗೆ ಕಾರ್ಯಕರ್ತನಿಂದ ಕಪಾಳಮೋಕ್ಷ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ...
ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗುಜರಾತ್ ನ ಸುರೇಂದ್ರನಗರದಲ್ಲಿ ನಡೆದ ಜನಾಕ್ರೋಶ ರ್ಯಾಲಿಯಲ್ಲಿ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಂತೆ ಕಾರ್ಯಕರ್ತನೊಬ್ಬ ಬಂದು ಕಪಾಳಮೋಕ್ಷ ಮಾಡಿದ್ದಾನೆ. ಕಾರ್ಯಕರ್ತ ತನ್ನ ಬಳಿ ಧನ್ಯವಾದ ಅರ್ಪಿಸಲು ಬರುತ್ತಿದ್ದಾನೆ ಎಂದು ಹಾರ್ದಿಕ್ ಪಟೇಲ್ ಭಾವಿಸಿದ್ದ ಆದರೆ ಕಾರ್ಯಕರ್ತ ದಿಢೀರ್ ಅಂತಾ ಬಂದು ಕಪಾಳಕ್ಕೆ ಬಾರಿಸಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಕಾಂಗ್ರೆಸ್ ಮುಖಂಡರು ಗಲಿಬಿಲಿಕೊಂಡರು.
ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನಕ್ಕೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಗೆ ಸೇರಿಕೊಂಡಿದ್ದರು. 2015ರಲ್ಲಿ ಪಾಟಿದಾರ್ ಸಮುದಾಯದ ಪರವಾಗಿ ಧ್ವನಿ ಎತ್ತಿದ್ದ ಹಾರ್ದಿಕ್ ಪಟೇಲ್ ಸಮುದಾಯದ ನಾಯಕನಾಗಿ ಗುರುತಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com