ಟಿಕೆಟ್ ನಿರಾಕರಣೆ: ಹಾಲಿ ಬಿಜೆಪಿ ಸಂಸದ ಉದಿತ್ ರಾಜ್ ಕಾಂಗ್ರೆಸ್ ಸೇರ್ಪಡೆ

ವಾಯುವ್ಯ ದೆಹಲಿ ಕ್ಷೇತ್ರದಿಂದ ಟಿಕೆಟ್‌ ಸಿಗದ ಹಿನ್ನಲೆಯಲ್ಲಿ ಆಕ್ರೋಶಗೊಂಡಿದ್ದ ಹಾಲಿ ಬಿಜೆಪಿ ಸಂಸದ ಉದಿತ್‌ ರಾಜ್‌ ಬುಧವಾರ ಬೆಳಗ್ಗೆ ಕಾಂಗ್ರೆಸ್‌...
ರಾಹುಲ್ ಗಾಂಧಿ ಮತ್ತು ಉದಿತ್ ರಾಜ್
ರಾಹುಲ್ ಗಾಂಧಿ ಮತ್ತು ಉದಿತ್ ರಾಜ್
ನವದೆಹಲಿ: ವಾಯುವ್ಯ ದೆಹಲಿ ಕ್ಷೇತ್ರದಿಂದ ಟಿಕೆಟ್‌ ಸಿಗದ ಹಿನ್ನಲೆಯಲ್ಲಿ ಆಕ್ರೋಶಗೊಂಡಿದ್ದ ಹಾಲಿ ಬಿಜೆಪಿ ಸಂಸದ ಉದಿತ್‌ ರಾಜ್‌ ಬುಧವಾರ ಬೆಳಗ್ಗೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲಿ ಉದಿತ್‌ ರಾಜ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಉದಿತ್‌ ರಾಜ್‌ಗೆ ಟಿಕೆಟ್‌ ನೀಡದೆ ಪ್ರಖ್ಯಾತ ಗಾಯಕ ಹಂಸ್‌ ರಾಜ್‌ ಹಂಸ್‌ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸಿದೆ.  ಟಿಕೆಟ್ ನೀಡದ ಬಿಜೆಪಿ ನಿರ್ಧಾರದಿಂದ ನೋವಾಗಿದ್ದು,  ಇದರಿಂದ ನಾನು ಕಾಂಗ್ರೆಸ್ ಸೇರಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com