ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಈ ಹಿಂದೆ ಬಾಬ್ರಿ ಮಸೀದಿ ಧ್ವಂಸ ಕುರಿತಂತೆ ಹೇಳಿಕೆ ನೀಡಿದ್ದ ಪ್ರಗ್ಯಾ ಸಿಂಗ್ ಠಾಕೂರ್, ಬಾಬ್ರಿ ಮಸೀದಿ ಧ್ವಂಸಗೊಳಿಸಿದ್ದವರ ಪೈಕಿ ನಾನೂ ಕೂಡ ಇದ್ದೆ. ಆ ಬಗ್ಗೆ ನಮಗೆ ಹೆಮ್ಮೆ ಇದೆ. ಅದೇ ಜಾಗದಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ಇದೇ ಹೇಳಿಕೆ ಭೋಪಾಲ್ ನಲ್ಲಿ ಅಲ್ಪ ಸಮುದಾಯದ ವಿರೋಧಕ್ಕೆ ಕಾರಣವಾಗಿತ್ತು. ಅಲ್ಲದೆ ಬಿಜೆಪಿಯ ಮುಸ್ಲಿಮ್ ಘಟಕ ಕೂಡ ಪ್ರಗ್ಯಾ ಸಿಂಗ್ ವಿರುದ್ಧ ಆಕ್ರೋಶಗೊಂಡಿತ್ತು.