ಅಂತೆಯೇ ಎಸ್ ಪಿ-ಬಿಎಸ್ ಪಿ ಪಕ್ಷಗಳ ಮೈತ್ರಿಯನ್ನು ಅವಕಾಶವಾದಿಗಳ ಮಹಾಕಲಬೆರಕೆ ಎಂದು ಟೀಕಿಸಿದ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷವು ಅಂಬೇಡ್ಕರ್ ವಿಚಾರಗಳ ವಿರೋಧಿ. ಆದರೆ ತಮ್ಮನ್ನು ತಾವು ದಲಿತರು ಎಂದು ಕರೆದುಕೊಳ್ಳುವ ಮಾಯಾವತಿ ಅವರು ಸಮಾಜವಾದಿಗಳ ಜತೆ ಕೈ ಜೋಡಿಸಿದ್ದಾರೆ. ಇವರ ಬಾಯಲ್ಲಿ ಬರೀ ಜಾತಿಯ ಮಂತ್ರ, ಮನಸಲ್ಲಿ ಹಣದ ಜಪ. ಕೆಲವರು ಅಂಬೇಡ್ಕರ್ ಹೆಸರಿನಲ್ಲಿ ಮತ ಕೇಳುತ್ತಾರೆ. ಆದರೆ ಅಂಬೇಡ್ಕರ್ ಅವರಿಂದ ಅವರು ಏನನ್ನೂ ಕಲಿತಿಲ್ಲ. ಅಧಿಕಾರ ಹಿಡಿಯುವುದೇ ಗುರಿಯಾದಾಗ ಮತ್ತು ದೇಶಕ್ಕಿಂತ ಜಾತಿ ರಾಜಕಾರಣವೇ ಮುಖ್ಯವಾದಾಗ ಹೀಗಾಗುತ್ತದೆ. ಈ ಅವಕಾಶವಾದಿ ದುರ್ಬಲರು ಸೇರಿ ಮಾಡುವ ಸರ್ಕಾರವೂ ದುರ್ಬಲವಾಗಿಯೇ ಇರಲಿದೆ ಎಂದು ಮೋದಿ ಹೇಳಿದರು.