ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರ ಚರ್ಚ್, ರೆಸ್ಟೋರೆಂಟ್ ಗಳಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ಬಳಿಕ ಇಸೀಸ್ ಉಗ್ರ ಸಂಘಟನೆ ಬೆಂಗಾಲಿ ಭಾಷೆಯಲ್ಲಿ ಪೋಸ್ಟರ್ ಗಳನ್ನು ಪ್ರಕಟಿಸಿದ್ದು, ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸುಳಿವು ನೀಡಿತ್ತು. ಈ ಬೆನ್ನಲ್ಲೇ ಕೈಲಾಶ್ ವಿಜಯವರ್ಗೀಯ ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಪಶ್ಚಿಮ ಬಂಗಾಳ ಮತ್ತೊಂದು ಜಮ್ಮು-ಕಾಶ್ಮೀರದಂತಾಗುತ್ತೆ ಎಂದು ಹೇಳಿದ್ದಾರೆ.