ಕೇರಳದ ವಯಾನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿರ್ಧಾರವನ್ನು ಟೀಕಿಸಿದ್ದ ಪ್ರಧಾನಿ ಮೋದಿ ಕಾಂಗ್ರೆಸ್ ಹಿಂದೂಗಳನ್ನು ಅವಮಾನ ಮಾಡಿದೆ, ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ತಮ್ಮ ನಾಯಕನನ್ನು ಕಣಕ್ಕಿಳಿಸಲು ಹೆದರುತ್ತಿದ್ದಾರೆ. ಅದಕ್ಕಾಗಿಯೇ ಅಲ್ಪಸಂಖ್ಯಾತರೆಂದು ಗುರುತಿಸಲ್ಪಡುವವರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರದಿಂದ ಪುನರ್ವಸತಿ ಪಡೆಯುವುದಕ್ಕೆ ರಾಹುಲ್ ಗಾಂಧಿ ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.