ನವದೆಹಲಿ: ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಚೌಕಿದಾರರು ಶ್ರೀಮಂತರಿಗೆ ಮಾತ್ರ ಕೆಲಸ ಮಾಡುತ್ತಿದ್ದು, ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದ್ದಾರೆ.ಕಬ್ಬು ಬೆಳೆಗಾರರಿಗೆ 10 ಸಾವಿರ ಕೋಟಿ ರೂಪಾಯಿ ಬಾಕಿಯನ್ನು ಉತ್ತರ ಪ್ರದೇಶ ಉಳಿಸಿಕೊಂಡಿರುವ ಬಗ್ಗೆ ಮಾಧ್ಯಮಗಳ ವರದಿಯನ್ನು ಟ್ವೀಟರ್ ನಲ್ಲಿ ಪ್ರಿಯಾಂಕ ಗಾಂಧಿ ಹಂಚಿಕೊಂಡಿದ್ದಾರೆ.
गन्ना किसानों के परिवार दिनरात मेहनत करते हैं। मगर उप्र सरकार उनके भुगतान का भी जिम्मा नहीं लेती। किसानों का 10000 करोड़ बकाया मतलब उनके बच्चों की शिक्षा, भोजन, स्वास्थ्य और अगली फसल सबकुछ ठप्प हो जाता है। यह चौकीदार सिर्फ अमीरों की ड्यूटी करते हैं, गरीबों की इन्हें परवाह नहीं। pic.twitter.com/LIBbwamdrS
— Priyanka Gandhi Vadra (@priyankagandhi) March 24, 2019
10 ಸಾವಿರ ಕೋಟಿ ಬಾಕಿ ಪಾವತಿಯಾಗದೆ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಮಕ್ಕಳ ಶಿಕ್ಷಣ, ಆಹಾರ, ಆರೋಗ್ಯ ಮತ್ತು ಮುಂದಿನ ಬೆಳೆ ಉತ್ಪಾದನೆ ಎಲ್ಲವೂ ಸ್ಥಗಿತಗೊಂಡಿದೆ. ಆದರೆ, ಚೌಕಿದಾರರು ಶ್ರೀಮಂತರ ಕೆಲಸ ಮಾಡುತ್ತಿದ್ದು, ಬಡವರ ಬಗ್ಗೆ ದಿವ್ಯ ನಿರ್ಲಕ್ಷ್ಯ ತಾಳಿವೆ ಎಂದು ಅವರು ಕಿಡಿಕಾರಿದ್ದಾರೆ.
ಪ್ರಿಯಾಂಕ ಗಾಂಧಿ ಇತ್ತೀಚಿಗೆ ಉತ್ತರ ಪ್ರದೇಶ ಪೂರ್ವದ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ