ಹೌದು.. ಟಿಕೆಟ್ ನಿರಾಕರಣೆಯ ನಂತರ ಬಿಜೆಪಿ ತನ್ನ ತಾರಾ ಪ್ರಚಾರಕ ಪಟ್ಟಿಯಿಂದಲೂ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮನೇಕಾ ಗಾಂಧಿ ಮತ್ತು ಮುರಳಿ ಮನೋಹರ ಜೋಶಿ ಅವರ ಹೆಸರುಗಳನ್ನು ಕೈ ಬಿಟ್ಟಿದೆ. ಉತ್ತರ ಪ್ರದೇಶದ ಲೋಕಸಭೆ ಚುನಾವಣೆಗೆ ಸ್ಟಾರ್ ಪ್ರಚಾರಕರಾಗಿ 40 ನಾಯಕರ ಹೆಸರನ್ನು ಪಕ್ಷ ಬಿಡುಗಡೆ ಮಾಡಿದೆ. ಆದರೆ ಪಟ್ಟಿಯಲ್ಲಿ ಎಲ್ ಕೆ ಆಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ, ಕೇಂದ್ರ ಸಚಿವ ಮೇನಕಾ ಗಾಂಧಿ ಮತ್ತು ಅವರ ಪುತ್ರ ವರುಣ್ ಗಾಂಧಿ ಅವರ ಹೆಸರುಗಳೂ ಕಾಣೆಯಾಗಿವೆ.