ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ: ರಾಹುಲ್ ಗಾಂಧಿ ಭೇಟಿ ಬಳಿಕ ಶತೃಘ್ನ ಸಿನ್ಹಾ ಹೇಳಿಕೆ

ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಖ್ಯಾತ ಬಾಲಿವುಡ್ ನಟ ಹಾಗೂ ಬಿಜೆಪಿ ರೆಬೆಲ್ ಮುಖಂಡ ಶತೃಘ್ನ ಸಿನ್ಹಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಖ್ಯಾತ ಬಾಲಿವುಡ್ ನಟ ಹಾಗೂ ಬಿಜೆಪಿ ರೆಬೆಲ್ ಮುಖಂಡ ಶತೃಘ್ನ ಸಿನ್ಹಾ ಹೇಳಿದ್ದಾರೆ.
ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಶತೃಘ್ನ ಸಿನ್ಹಾ, ನಾನು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಅಂತೆಯೇ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬವನ್ನು ಹೊಗಳಿರುವ ಶತೃಘ್ನ ಸಿನ್ಹಾ ದೇಶ ನಿರ್ಮಾಣ ಕಾರ್ಯದಲ್ಲಿ ಗಾಂಧಿ ಕುಟುಂಬ ನಿರ್ಣಾಯ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ  ರಾಹುಲ್ ಗಾಂಧಿ ನಾಯಕತ್ವವನ್ನು ಹಾಡಿಹೊಗಳಿರುವ ಸಿನ್ಹಾ, ರಾಹುಲ್ ಗಾಂಧಿ ಸಾಕಷ್ಟು ಧನಾತ್ಮಕ ಗುಣಗಳನ್ನು ಹೊಂದಿದ್ದಾರೆ. ಪ್ರತಿಯೊಬ್ಬರನ್ನೂ ಪ್ರೋತ್ಸಾಹಿಸುತ್ತಾರೆ. ವಯಸ್ಸಿನಲ್ಲಿ ನನಗಿಂತ ಕಿರಿಯನಾದರೂ, ಇಂದು ಆತ ದೇಶದ ಜನಪ್ರಿಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಇಂದು ನಾನು ಬಿಜೆಪಿ ತೊರೆಯುತ್ತಿರುವುದಕ್ಕೆ ಅಲ್ಲಿನ ಸರ್ವಾಧಿಕಾರಿ ಧೋರಣೆಯೇ ಕಾರಣ. ಇದೇ ಕಾರಣಕ್ಕಾಗಿ ನಾನು ಇಂದು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದು, ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com