ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ.
2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣ ಹಾರ್ದಿಕ್ ಪಟೇಲ್ ವಿರುದ್ಧ ಇದ್ದು, ತನ್ನ ಕುರಿತ ತೀರ್ಪಿಗೆ ತಡೆ ನೀಡಬೇಕೆಂದು ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.
1951 ರ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಹಾರ್ದಿಕ್ ಪಟೇಲ್ ವಿರುದ್ಧದ ಆರೋಪ ಸಾಬೀತಾಗಿದ್ದು ಅಪರಾಧಿಯಾಗಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಾಧ್ಯವಾಗುವುದಿಲ್ಲ.