ಬಿಜೆಪಿ ನನ್ನ ಜೀವನದಿಂದ ದೂರವಾದರೆ ನಾನು ಬರಿ ಶೂನ್ಯ: ಅಮಿತ್ ಶಾ

ನಾನು ಇಂದು ಏನಾಗಿದ್ದೇನೋ ಅದಕ್ಕೆ ಬಿಜೆಪಿ ಕಾರಣ, ಭಾರತೀಯ ಜನತಾ ಪಕ್ಷಕ್ಕೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ...
ಅಮಿತ್ ಶಾ
ಅಮಿತ್ ಶಾ
ಗಾಂಧಿನಗರ: ನಾನು ಇಂದು ಏನಾಗಿದ್ದೇನೋ ಅದಕ್ಕೆ ಬಿಜೆಪಿ ಕಾರಣ, ಭಾರತೀಯ ಜನತಾ ಪಕ್ಷಕ್ಕೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಗಾಂಧಿನಗರ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೊದಲು ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ,  ಒಂದು ವೇಳೆ  ಬಿಜೆಪಿ ನನ್ನ ಜೀವನದಿಂದ ದೂರಾದರೇ ಉಳಿಯುವುದು ಶೂನ್ಯ ಎಂದು ಹೇಳಿದ್ದಾರೆ.
ರಾಜ್ಯಸಭೆ ಸದಸ್ಯರಾಗಿದ್ದ ಅಮಿತ್ ಶಾ ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ, ಹಿರಿಯ ನಾಯಕ ಎಲ್,ಕೆ ಆಡ್ವಾಣಿ ಅವರ ಗಾಂಧಿನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಅಹಮದಾಬಾದ್ ನ ನಾರಾಯಣಪುರ ದಲ್ಲಿ ನಡೆದ ರ್ಯಾಲಿಯಲ್ಲಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಭಾಗವಹಿಸಿರಲಿಲ್ಲ. ಎಲ್,ಕೆ ಅಡ್ವಾಣಿ ಮತ್ತು ವಾಜಪೇಯಿ ಅವರು ಗಾಂಧಿನಗರ ಕ್ಷೇತ್ರದಿಂದ ಸಂಸದರಾಗಿದ್ದರು, ಅವರ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಅದೃಷ್ಟ ಮಾಡಿದ್ದೆ ಎಂದು ತಿಳಿಸಿದ್ದಾರೆ, ಬಿಜೆಪಿ ತತ್ವ ಸಿದ್ಧಾಂತವುಳ್ಳ ಪಕ್ಷ ಎಂದು ತಿಳಿ ಸಿದ್ದಾರೆ,
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಅಮಿತ್ ಶಾ ಸರ್ದಾರ್ ವಲ್ಲಭಬಾಯಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com