ಪುತ್ತೂರು: ಅಭ್ಯರ್ಥಿಗಳು ಮತ ಕೇಳಲು ತಮ್ಮ ಕೆಲಸಗಳನ್ನು ಉದಾಹರಣೆಯಾಗಿ ನೀಡದೆ ತಮ್ಮ ನಾಯಕರ ಹೆಸರನ್ನು ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ನನ್ನ ಸ್ಪರ್ಧೆ ಮೂಲಕ ಈ ಪ್ರಮುಖ ಸಂದೇಶವನ್ನು ಎಲ್ಲಾ ಮನೆಗಳಿಗೆ ತಲುಪಿಸಬೇಕು ಎನ್ನುವ ಮಹತ್ವಾಕಾಂಕ್ಷೆಯೊಡನೆ ಉತ್ತರ ಪ್ರದೇಶದ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸ್ಪರ್ಧಿಸಿದ್ದ ಮಂಗಳೂರು ವೈದ್ಯ, ಪತ್ರಿಕೋದ್ಯಮಿ ಡಾ.ಯು.ಪಿ. ಶಿವಾನಂದ ಅವರ ನಾಮಪತ್ರ ತಿರಸ್ಕೃತವಾಗಿದೆ.