'ಸೊಕ್ಕಿನ ಪರಮಾವಧಿ'.. ಸಿಖ್ ನರಮೇಧ ಕುರಿತ 'ಕೈ' ಹೇಳಿಕೆಗೆ ಪ್ರಧಾನಿ ಮೋದಿ ತೀವ್ರ ಖಂಡನೆ

ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ನೀಡಿರುವ ಹೇಳಿಕೆ ಇದೀಗ ಹೊಸದೊಂದು ವಾಕ್ಸಮರಕ್ಕೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ರೋಹ್ಟಕ್: ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ನೀಡಿರುವ ಹೇಳಿಕೆ ಇದೀಗ ಹೊಸದೊಂದು ವಾಕ್ಸಮರಕ್ಕೆ ನಾಂದಿ ಹಾಡಿದ್ದು, ಈ ಸಂಬಂಧ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಪ್ರಧಾನಿ ಮೋದಿ ಮನುಷ್ಯರ ಜೀವಕ್ಕೆ ಬೆಲೆಯೇ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇಂದು ಹರ್ಯಾಣದ ರೋಹ್ಟಕ್ ನಲ್ಲಿ ನಡೆದ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರ ಹೇಳಿಕೆ ಅವರ ಸೊಕ್ಕಿನ ಪರಮಾವಧಿಯಾಗಿದ್ದು, ಗಾಂಧಿ ಕುಟುಂಬದ ಆಪ್ತರ ಈ ಹೇಳಿಕೆ ಕಾಂಗ್ರೆಸ್ ಜನ ಸಾಮಾನ್ಯರ ಮೇಲಿರುವ ಕಾಳಜಿಯನ್ನು ಮತ್ತು ಮಾನವೀಯತೆಯನ್ನು ತೋರಿಸುತ್ತದೆ. 
ಅಂದು 1984ರಲ್ಲಿ ಇದೇ ಕಾಂಗ್ರೆಸ್ ಹರ್ಯಾಣ, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ ಮತ್ತು ಉತ್ತರ ಪ್ರದೇಶದ ಸಿಖ್ಖರ ನರಮೇಧ ನಡೆಸಿತ್ತು. ಅಂದು ಸಾವಿರಾರು ಅಮಾಯಕ ಸಿಖ್ಕರು ತಾವೇಕೆ ಪ್ರಾಣ ಕಳೆದುಕೊಳ್ಳುತ್ತಿದ್ದೇವೆ ಎಂಬ ಅರಿವೂ ಇಲ್ಲದೇ ಸಾವನ್ನಪ್ಪಿದ್ದರು. ಕನಿಷ್ಠ ಪಕ್ಷ ಅವರ ಸಾವಿನ ಕುರಿತು ಮಾನವೀಯ ಮಾತುಗಳನ್ನೂ ಆಡಗ ಕಾಂಗ್ರೆಸ್ ಪಕ್ಷದಿಂದ ಇದನ್ನು ಬಿಟ್ಟು ಬೇರೇನು ನಿರೀಕ್ಷಿಸಲು ಸಾಧ್ಯ ಎಂದು ಮೋದಿ ಹೇಳಿದ್ದಾರೆ.
ಆ ಮೂರು ಪದಗಳು ಕಾಂಗ್ರೆಸ್ ಪಕ್ಷದ ಅಸ್ವಸ್ಥ ಮಾನಸಿಕತೆಯನ್ನು, ಕಾಂಗ್ರೆಸ್ ಪಕ್ಷದ ಅಮಾನವೀಯತೆ ಮತ್ತು ಜನರ ಕುರಿತಂತೆ ಆ ಪಕ್ಷಕ್ಕೆ ಇರುವ ಸೊಕ್ಕನ್ನು ತೋರಿಸುತ್ತದೆ ಎಂದು ಮೋದಿ ಹೇಳಿದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸ್ಯಾಮ್ ಪಿತ್ರೋಡಾ ಅವರು, ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಸಿಖ್ ನರಮೇಧದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆಗಿದ್ದು ಆಗಿ ಹೋಯಿತು ಏನು ಮಾಡಲು ಸಾಧ್ಯ. ಈಗ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಮಾಡಿರುವ ಅಭಿವೃದ್ಧಿ ಕೆಲಸಗಳ ಕುರಿತು ಮಾತನಾಡಿ ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ರಾಜಕೀಯ ಪಕ್ಷಗಳ ಹೊಸ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com