ಮಧ್ಯಪ್ರದೇಶದಲ್ಲಿ ಕಳೆದ ತಿಂಗಳು ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು ಬುಡಕಟ್ಟು ಜನಾಂಗದ ವಿರೋಧಿಯಾಗಿದ್ದಾರೆ. ಹೊಸ ಕಾನೂನನ್ನು ಕೇಂದ್ರ ಸರ್ಕಾರ ಹೊರತಂದಿದ್ದು, ಅದರ ಅನ್ವಯ ಪೊಲೀಸರು ಬುಡಕಟ್ಟು ಸಮುದಾಯದ ಜನರ ಮೇಲೆ ಗುಂಡು ಹಾರಿಸಬಹುದು, ಅಲ್ಲದೆ ಜನಾಂಗದವರು ವಾಸವಾಗಿರುವ ಭೂಮಿ, ಅರಣ್ಯ, ಬಳಸುವ ನೀರು ಎಲ್ಲವನ್ನೂ ವಶಪಡಿಸಿಕೊಳ್ಳಬಹುದು ಎಂದು ಹೇಳಿದ್ದರು.