ಟಿಕೆಟ್ ಗಾಗಿ ನನ್ನ ತಂದೆಯಿಂದ ಕೇಜ್ರಿವಾಲ್ ಗೆ 6 ಕೋಟಿ: ಆಪ್ ಅಭ್ಯರ್ಥಿಯ ಪುತ್ರ!

ದೆಹಲಿಯಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದೆ.
ಕೇಜ್ರಿವಾಲ್
ಕೇಜ್ರಿವಾಲ್
ನವದೆಹಲಿ: ದೆಹಲಿಯಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದೆ. 
ಪಶ್ಚಿಮ ದೆಹಲಿಯಿಂದ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಲ್ ಬೀರ್ ಸಿಂಗ್ ಜಖಾರ್ ಅವರ ಪುತ್ರ ಉದಯ್ ಆಪ್ ಮುಖ್ಯಸ್ಥ, ಸಿಎಂ ಕೇಜ್ರಿವಾಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 
ನನ್ನ ತಂದೆ ಟಿಕೆಟ್ ಪಡೆಯುವುದಕ್ಕಾಗಿ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಗೆ 6 ಕೋಟಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. 
ಟಿಕೆಟ್ ಪಡೆಯುವುದಕ್ಕಾಗಿ ಕೇಜ್ರಿವಾಲ್ ಗೆ 6 ಕೋಟಿ ರೂಪಾಯಿ ನೀಡಿದ್ದೇನೆ ಎಂದು ಸ್ವತಃ ನನ್ನ ತಂದೆಯೇ ನನ್ನ ಬಳಿ ಹೇಳಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡಿದ್ದ ಕೇಜ್ರಿವಾಲ್ ಹಣ ಪಡೆದು ಭ್ರಷ್ಟರಾಗಿದ್ದಾರೆ ಎಂದು ಉದಯ್ ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com