ಮೋದಿಯವರ ವಿರುದ್ಧ ವೈಯಕ್ತಿಕ ವಾಗ್ದಾಳಿ ನಡೆಸಿದ ಮಾಯಾವತಿಯವರು ಸಾರ್ವಜನಿಕ ಜೀವನದಲ್ಲಿರಲು ಅನರ್ಹರು ಎಂದು ಹೇಳಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ಕೂಡ ಮಾಯಾವತಿ ಹರಿಹಾಯ್ದಿದ್ದಾರೆ. ಮೋದಿಯವರು ಸಿಎಂ ಆಗಿ ಮಾತ್ರವಲ್ಲದೆ ದೇಶದ ಪ್ರಧಾನ ಮಂತ್ರಿಯಾಗಿ ಅವರ ಆಡಳಿತ ಅರಾಜಕತೆ, ಹಿಂಸಾಚಾರ, ಆತಂಕ ಮತ್ತು ದ್ವೇಷಗಳಿಂದ ಕೂಡಿದೆ. ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಅವರು ಅನರ್ಹರಾಗಿದ್ದು ಅಯೋಗ್ಯರು ಕೂಡ. ಭಾರತೀಯ ಸಂಸ್ಕೃತಿ ಮತ್ತು ಸಂವಿಧಾನದ ಆಶಯಗಳಿಗೆ ಮೋದಿಯವರು ಗೌರವ ಕೊಡುತ್ತಿಲ್ಲ ಎಂದರು.