ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟೀಕೆ ಮಾಡಿದ್ದ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ, ಸಚಿವ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಪ್ರಧಾನಿ ವಿರುದ್ಧ ಟೀಕೆ ಮಾಡುವ ಭರದಲ್ಲಿ ನವಜೋತ್ ಸಿಂಗ್ ಸಿಧು, ಪ್ರಧಾನಿಯನ್ನು ’ಕೆಲಸ ಮಾಡಿವಂತೆ ನಟಿಸುವ ವಧು’ವಿಗೆ ಹೋಲಿಕೆ ಮಾಡಿದ್ದರು.
ಪ್ರಧಾನಿ ವಿರುದ್ಧ ಅವಹೇಳನಕಾರಿ ಟೀಕೆ ಮಾಡಿದ್ದ ಸಿಧು ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆದರೆ ಚುನಾವಣಾ ಆಯೋಗ ಸಿಧು ವಿರುದ್ಧದ ದೂರನ್ನು ತಿರಸ್ಕರಿಸಿದ್ದು, ಸಿಧು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ.