ನವದೆಹಲಿ: ಕೇಂದ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ. ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಮುಖ್ಯ ಗುರಿ ಎಂದಿದ್ದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಯೂ-ಟರ್ನ್ ಹೊಡೆದಿದ್ದು, ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಹಕ್ಕು ಮಂಡಿಸಲಿದೆ ಎಂದು ಹೇಳಿದ್ದಾರೆ.