ಪ.ಬಂಗಾಳ/ ಬಿಹಾರ: ಕೊನೆಯ ಹಂತದ ಚುನಾವಣೆಯಲ್ಲಿ ದೇಶಾದ ಒಟ್ಟು 59 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಅಹಿತಕರ ಘಟನೆಗಳು ವರದಿಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು, ಬಿಜೆಪಿಯ ಬಾಬುಲ್ ಸುಪ್ರಿಯೋ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
7 ನೇ ಹಂತದ ಚುನಾವಣೆಯಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, 10.1 ಕೋಟಿ ಜನರು ಮತದಾನ ಮಾಡಲಿದ್ದಾರೆ.
ಇದೇ ವೇಳೆ ಬಿಹಾರದಲ್ಲಿಯೂ ಹಿಂಸಾಚಾರದ ವರದಿಗಳಾಗಿದ್ದು, ಆರ್ ಜೆಡಿಯ ತೇಜ್ ಪ್ರತಾಪ್ ಯಾದವ್ ನ ಭದ್ರತಾ ಗಾರ್ಡ್ ಗಳು ಮಾಧ್ಯಮದವರನ್ನು ತಳ್ಳಿ, ವಾಗ್ದಾಳಿ ನಡೆಸಿದ್ದಾರೆ.