ಸುಹೆಲ್ ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್ ಹಿಂದುಳಿದ ಕಲ್ಯಾಣ ಹಾಗೂ ದಿವ್ಯಾಂಗ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ಈ ಹಿಂದೆ ಅವರು ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿರಲಿಲ್ಲ. ಆದರೆ ಚುನಾವಣೋತ್ತರ ಸಮೀಕ್ಷೆ ಬಂದ ದಿನ ರಾಜ್ ಭರ್ ಎಸ್ ಪಿ-ಬಿಎಸ್ ಪಿ ಮೈತ್ರಿಕೂಟ ಬಿಜೆಪಿ ವಿರುದ್ಧ ಹೆಚ್ಚಿನ ಬಹುಮತ ಗಳಿಸಲಿದೆ. ಈ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ ಎಂದು ಹೇಳಿದ್ದರು.