ಖಾಸಗಿ ವಾಹಿನಿಯ ಚರ್ಚಾ ಕಾರ್ಯಕ್ರಮದಲ್ಲೂ ಕುರಿತಂತೆ ಕಿಡಿಕಾರಿರುವ ತೇಜಸ್ವಿ ಸೂರ್ಯ, ಫಲಿತಾಂಶ ಬಿಜೆಪಿ ಪರ ಬಂದರೆ ಇವರು ಮತಯಂತ್ರಗಳು ಸರಿಇಲ್ಲ ಎಂದು ಬೊಬ್ಬೆ ಇಡುತ್ತಾರೆ. ಅದೇ ಮಧ್ಯ ಪ್ರದೇಶದಲ್ಲಿ, ಆಂಧ್ರ ಪ್ರದೇಶದಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದಾಗ ಇದೇ ಇವಿಎಂಗಳ ವಿಶ್ವಾಸಾರ್ಹತೆ ಕುರಿತು ಚಕಾರವೆತ್ತುವುದಿಲ್ಲ. ಫಲಿತಾಂಶ ತಮ್ಮ ಪರವಾಗಿ ಬಾರದಿದ್ದರೆ ಮಾತ್ರ ಇವಿಎಂಗಳು ಸರಿ ಇಲ್ಲ ಎನ್ನುತ್ತಾರೆ ಎಂದು ಕಿಡಿಕಾರಿದ್ದಾರೆ.