ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿಪ್ಯಾಟ್ ಕಾಗದಗಳನ್ನು ಸಂಪೂರ್ಣವಾಗಿ ಲೆಕ್ಕ ಹಾಕಬೇಕೆಂದು ಬೇಡಿಕೆ ಇಟ್ಟಿದ್ದವು. ಆದರೆ ಚುನಾವಣಾ ಆಯೋಗವು ಬೇಡಿಕೆಯನ್ನು ತಿರಸ್ಕರಿಸಿದ್ದು ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ ಕಾರ್ಯವಿಧಾನದಲ್ಲಿ ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದಿದೆ.