ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ ಪಕ್ಷ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಭರ್ಜರಿ ತಿರುಗೇಟು ನೀಡಿದ್ದಾರೆ.