ಇಂದು ಮಧ್ಯಾಹ್ನ ದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಚಂದ್ರಬಾಬು ನಾಯ್ಡು ಅವರು ಈಗ ಬೆಂಗಳೂರಿಗೆ ಆಗಮಿಸಿ, ದೇವೇಗೌಡ ಹಾಗೂ ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಭಾಗವಹಿಸಬೇಕಿತ್ತು. ಆದರೆ ಈ ಇಬ್ಬರು ನಾಯಕರು ಕೊನೆಗಳಿಗೆಯಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದರು.