'ಬಿಜೆಪಿಯ ನಿಜಕ್ಕೂ ಅದೃಷ್ಟ ಎಂದರೆ ನಮ್ಮಲ್ಲಿರುವ ಕೋಟಿ ಕೋಟಿ ಕಾರ್ಯಕರ್ತರ ಮನದಲ್ಲಿರುವುದು ಕೇವಲ ಭಾರತ ಮಾತೆ, ಭಾರತ ಮಾತೆ. ಇದು ಮೆಚ್ಚುಗೆ ವಿಷಯ. ಕೆಲವು ದಶಕಗಳ ಹಿಂದೆ ನಮ್ಮ ಪಕ್ಷ ಕೇವಲ ಎರಡು ಸ್ಥಾನ ಹೊಂದಿತ್ತು. ಆದರೆ ಈಗ ಎರಡನೇ ಬಾರಿಗೆ ನಾವು ಅಧಿಕಾರಕ್ಕೆ ಬಂದಿದ್ದೇವೆ. ಎರಡು ಸ್ಥಾನ ಇದ್ದಾಗ ನಾವು ನಿರಾಶರಾಗಿರಲಿಲ್ಲ. ಈಗ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದರೂ ನಮ್ಮ ಆಶಯ, ನಮ್ರತೆ, ವಿನಯತೆ, ಧೋರಣೆ, ಸಿದ್ಧಾಂತಗಳನ್ನು ಮರೆತಿಲ್ಲ, ಮರೆಯುವುದೂ ಇಲ್ಲ. ಅಂದು ಯಾವ ಸಂಸ್ಕಾರ ಇತ್ತೋ ಅದೇ ಸಂಸ್ಕಾರ ಈಗಲೂ ಇದೆ, ಮುಂದೆಯೂ ಇರಲಿದೆ ಎಂದು ಹೇಳಿದರು.