ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು; ನಾಳೆ ಸಿಡಬ್ಲ್ಯುಸಿ ಸಭೆ

17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: 17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ಕರೆಯಲು ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೈಯಲ್ಲಿ ಸಿಲುಕಿ ಕಾಂಗ್ರೆಸ್ ಸೋತು ಸುಣ್ಣವಾದಂತಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ದಕ್ಕಿದ್ದು ಕೇವಲ 52 ಸೀಟುಗಳು. ಆದರೆ ಬಿಜೆಪಿಯ ಅಭೂತಪೂರ್ವ ಗೆಲುವು 2014ಕ್ಕಿಂತಲೂ ಜಾಸ್ತಿಯಾಗಿದ್ದು 303 ಸೀಟು ಸಿಕ್ಕಿದೆ. ಕಳೆದ ವರ್ಷಕ್ಕಿಂತ 30 ಸೀಟುಗಳು ಜಾಸ್ತಿಯಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯಕರುಗಳೇ ಸೋತು ಮಕಾಡೆ ಮಲಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜ್ಯೋತಿರಾಧಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರಿಗೆ ಕೇಸರಿ ಪಡೆಯ ಅಲೆಯನ್ನು ತಡೆಯಲು ಸಾಧ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com