ಭುವನೇಶ್ವರ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ(ಒಪಿಸಿಸಿ) ಅಧ್ಯಕ್ಷ ನಿರಂಜನ್ ಪಟ್ನಾಯಕ್ ಅವರು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆಹೊತ್ತು ಶುಕ್ರವಾರ ತಮ್ಮ ಸ್ಥಾನ ರಾಜೀನಾಮೆ ನೀಡಿದ್ದಾರೆ.
ಒಡಿಶಾದಲ್ಲಿ ಪಕ್ಷದ ಸೋಲಿನ ಹೊಣೆಹೊತ್ತು ಒಪಿಪಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಳುಹಿಸಿರುವುದಾಗಿ ನಿರಂಜನ್ ಪಟ್ನಾಯಕ್ ಅವರು ಹೇಳಿದ್ದಾರೆ.
ಒಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ನಾನು ಕಾಂಗ್ರೆಸ್ ನಲ್ಲೇ ಮುಂದುವರೆಯುತ್ತೇನೆ ಮತ್ತು ಪಕ್ಷ ಸಂಘಟನೆಗಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ಲೋಕಸಭೆ ಜತೆಗೆ ನಡೆದ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಘಸಿಪುರ ಮತ್ತು ಭಂಡಾರಿಪೋಖರಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ನಿರಂಜನ್ ಪಟ್ನಾಯಕ್ ಅವರು ಎರಡೂ ಕಡೆಯೂ ಸೋಲು ಅನುಭವಿಸಿದ್ದಾರೆ.