ಇನ್ನು ಇತ್ತೀಚೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅವರನ್ನು ಟೀಕಿಸಿದ್ದ ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, 'ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್ ಅವರು ನಾಯ್ಡು ಸಮುದಾಯಕ್ಕೆ ಸೇರಿದವರು. ಅವರ ಜೊತೆ ಪ್ರಚಾರ ಮಾಡುತ್ತಿರುವ ದರ್ಶನ್ ಮತ್ತು ರಾಕ್ ಲೈನ್ ವೆಂಕಟೇಶ್ ಅವರೂ ನಾಯ್ಡುಗಳೇ. ಬೆಂಗಳೂರು ಸುತ್ತಮುತ್ತ ಇದ್ದ ನಾಯ್ಡುಗಳು ಈ ಮಂಡ್ಯಕ್ಕೆ ಬಂದಿದ್ದಾರೆ. ಮಂಡ್ಯವನ್ನು ನಾಯ್ಡುಮಯ ಮಾಡಲು ಹೊರಟಿದ್ದಾರೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.