ಆದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿರುವ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಸುಮಲತಾಗೆ ಬೆಂಬಲ ನೀಡುವುಜದಾಗಿ ಹೇಳಿದ್ದಾರೆ. ಕಾರ್ಯಕರ್ತರಿಂದಲೇ ಪಕ್ಷವೇ ಹೊರತು ನಾಯಕರಿಂದ ಪಕ್ಷವಲ್ಲ , ಕಾರ್ಯಕರ್ತರಿಂದ ಪಕ್ಷ ಮತ್ತು ನಾಯಕರನ್ನು ಉಳಿಸಲು ಮಾಕ್ರ ಸಾಧ್ಯ ಎಂದು ಹೇಳಿರುವ ಕಾರ್ಯಕರ್ತರು ಹಿರಿಯ ಕಾಂಗ್ರೆಸ್ ಮುಖಂಡರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.